Home Bibles ಅಪೋಸ್ತಲರ ಕೃತ್ಯಗಳು 23:12 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 23:12 · ಕನ್ನಡ ಬೈಬಲ್

ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

Cross references

ಲೇವ್ಯಕಾಂಡ 27:29

ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.

ಯೆಹೋಶುವ 6:26

ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.

ಯೆಹೋಶುವ 7:1

ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

ಯೆಹೋಶುವ 7:15

ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.

1 ಸಮುವೇಲ 14:24

ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.

1 ಸಮುವೇಲ 14:27

ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.

1 ಸಮುವೇಲ 14:40

ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.

1 ಅರಸುಗಳು 19:2

ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.

2 ಅರಸುಗಳು 6:31

ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.

ನೆಹೆಮ್ಯ 10:29

ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;

ಎಸ್ತೇರ್ 2:22

ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.

ಕೀರ್ತನೆಗಳು 2:1

ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?

ಕೀರ್ತನೆಗಳು 31:13

ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.

ಕೀರ್ತನೆಗಳು 64:2

ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.

ಯೆಶಾಯ 8:9

ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.

ಮತ್ತಾಯ 26:4

ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಮತ್ತಾಯ 26:74

ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಮಾರ್ಕ 6:23

ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.

ಅಪೋಸ್ತಲರ ಕೃತ್ಯಗಳು 23:14

ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.

ಅಪೋಸ್ತಲರ ಕೃತ್ಯಗಳು 23:21

ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ

ಅಪೋಸ್ತಲರ ಕೃತ್ಯಗಳು 23:30

ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ

ಅಪೋಸ್ತಲರ ಕೃತ್ಯಗಳು 25:3

ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

1 ಕೊರಿಂಥದವರಿಗೆ 16:22

ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

Interlinear

Choose Theme