ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
Cross references
ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?