ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
Cross references
ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.