ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
Cross references
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ