ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
Cross references
ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.