Home Bibles ಅಪೋಸ್ತಲರ ಕೃತ್ಯಗಳು 26:20 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 26:20 · ಕನ್ನಡ ಬೈಬಲ್

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

Cross references

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಯೆಶಾಯ 55:7

ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಯೆರೆಮಿಯ 31:19

ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.

ವಿಲಾಪಗಳು 3:40

ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.

ಯೆಹೆಜ್ಕೇಲ 18:30

ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.

ಹೊಶೇಯ 12:6

ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;

ಹೊಶೇಯ 14:2

ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 3:8

ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

ಮತ್ತಾಯ 4:17

ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಮತ್ತಾಯ 9:13

ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.

ಮತ್ತಾಯ 21:30

ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

ಮಾರ್ಕ 6:12

ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.

ಲೂಕ 1:16

ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.

ಲೂಕ 3:8

ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಲೂಕ 13:3

ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

ಲೂಕ 13:5

ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

ಲೂಕ 15:7

ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 19:8

ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

ಲೂಕ 24:46

ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 3:19

ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೋಸ್ತಲರ ಕೃತ್ಯಗಳು 9:15

ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.

ಅಪೋಸ್ತಲರ ಕೃತ್ಯಗಳು 9:19

ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.

ಅಪೋಸ್ತಲರ ಕೃತ್ಯಗಳು 9:35

ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.

ಅಪೋಸ್ತಲರ ಕೃತ್ಯಗಳು 11:18

ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 11:26

ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 14:15

ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ

ಅಪೋಸ್ತಲರ ಕೃತ್ಯಗಳು 15:19

ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.

ಅಪೋಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 22:17

ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--

ಅಪೋಸ್ತಲರ ಕೃತ್ಯಗಳು 26:17

ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ರೋಮಾಪುರದವರಿಗೆ 11:18

ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.

2 ಕೊರಿಂಥದವರಿಗೆ 3:16

ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.

2 ಕೊರಿಂಥದವರಿಗೆ 7:10

ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

ಎಫೆಸದವರಿಗೆ 4:17

ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

Interlinear

Choose Theme