ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
Cross references
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;