Home Bibles ಅಪೋಸ್ತಲರ ಕೃತ್ಯಗಳು 26:23 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 26:23 · ಕನ್ನಡ ಬೈಬಲ್

ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.

Cross references

ಆದಿಕಾಂಡ 3:15

ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಕೀರ್ತನೆಗಳು 16:8

ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.

ಕೀರ್ತನೆಗಳು 22:1

ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.

ಯೆಶಾಯ 53:1

ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಜೆಕರ್ಯ 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಮತ್ತಾಯ 27:53

ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಲೂಕ 2:32

ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕ 24:26

ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಲೂಕ 24:46

ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

ಯೋಹಾನ 10:18

ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.

ಯೋಹಾನ 11:25

ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:18

ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

ಅಪೋಸ್ತಲರ ಕೃತ್ಯಗಳು 13:34

ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

ಅಪೋಸ್ತಲರ ಕೃತ್ಯಗಳು 26:8

ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

ಅಪೋಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

1 ಕೊರಿಂಥದವರಿಗೆ 15:3

ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

1 ಕೊರಿಂಥದವರಿಗೆ 15:20

ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.

ಕೊಲೊಸ್ಸೆಯವರಿಗೆ 1:18

ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

ಹೆಬ್ರಿಯರಿಗೆ 2:10

ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

ಪ್ರಕಟನೆ 1:5

ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

Interlinear

Choose Theme