ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು