ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.