ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
Cross references
ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.