ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
Cross references
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.