ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
Cross references
ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.