ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
Cross references
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.