ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
Cross references
ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.