ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Cross references
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.