Home Bibles ಅಪೋಸ್ತಲರ ಕೃತ್ಯಗಳು 28:4 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 28:4 · ಕನ್ನಡ ಬೈಬಲ್

ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

Cross references

ಆದಿಕಾಂಡ 3:1

ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.

ಆದಿಕಾಂಡ 4:8

ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

ಆದಿಕಾಂಡ 9:5

ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

ಆದಿಕಾಂಡ 42:21

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ಅಂಕೆಗಳ ಪುಸ್ತಕ 35:31

ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.

ಸಾಮೇತಿಗಳು 28:17

ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

ಯೆಶಾಯ 13:21

ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.

ಯೆಶಾಯ 26:21

ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆಶಾಯ 43:20

ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

ಸೆಫನ್ಯ 2:15

ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.

ಮತ್ತಾಯ 23:35

ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಲೂಕ 13:2

ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?

ಲೂಕ 13:4

ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

ಯೋಹಾನ 7:24

ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

ಯೋಹಾನ 9:1

ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಅಪೋಸ್ತಲರ ಕೃತ್ಯಗಳು 28:2

ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.

ಅಪೋಸ್ತಲರ ಕೃತ್ಯಗಳು 28:5

ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Interlinear

Choose Theme