ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
Cross references
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.