ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
Cross references
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.