ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
Cross references
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ