ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
Cross references
ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.