ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
Cross references
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.