Home Bibles ಅಪೋಸ್ತಲರ ಕೃತ್ಯಗಳು 4:28 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 4:28 · ಕನ್ನಡ ಬೈಬಲ್

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

Cross references

ಆದಿಕಾಂಡ 50:20

ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.

ಯೋಬ 12:13

ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.

ಕೀರ್ತನೆಗಳು 76:10

ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಯೆಶಾಯ 5:19

ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!

ಯೆಶಾಯ 28:29

ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.

ಯೆಶಾಯ 40:13

ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?

ಯೆಶಾಯ 46:10

ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

ಯೆಶಾಯ 53:10

ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಮತ್ತಾಯ 26:24

ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

ಮತ್ತಾಯ 26:54

ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.

ಲೂಕ 22:22

ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:18

ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಎಫೆಸದವರಿಗೆ 1:11

ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.

ಹೆಬ್ರಿಯರಿಗೆ 6:17

ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

1 ಪೇತ್ರ 2:7

ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

Interlinear

Choose Theme