ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
Cross references
ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ವಿಶ್ರಮಿಸಿಕೊಳ್ಳುವದೂ ಇಲ್ಲ.
ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.