ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
Cross references
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.