ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
Cross references
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.