ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
Cross references
ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.