ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
Cross references
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.