ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
Cross references
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.