ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
Cross references
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.