ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
Cross references
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.