ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
Cross references
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.