ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Cross references
ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.