ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
Cross references
ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.