ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Cross references
ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.