ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
Cross references
ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.