ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Cross references
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.