ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
Cross references
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.