Home Bibles ಅಪೋಸ್ತಲರ ಕೃತ್ಯಗಳು 6:7 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 6:7 · ಕನ್ನಡ ಬೈಬಲ್

ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

Cross references

2 ದಿನವೃತ್ತಾಂತ 29:34

ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.

2 ದಿನವೃತ್ತಾಂತ 30:24

ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.

ಕೀರ್ತನೆಗಳು 132:9

ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.

ಕೀರ್ತನೆಗಳು 132:16

ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.

ಮತ್ತಾಯ 19:30

ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.

ಲೂಕ 2:34

ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.

ಯೋಹಾನ 12:42

ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.

ಅಪೋಸ್ತಲರ ಕೃತ್ಯಗಳು 12:24

ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

ಅಪೋಸ್ತಲರ ಕೃತ್ಯಗಳು 13:8

ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

ಅಪೋಸ್ತಲರ ಕೃತ್ಯಗಳು 14:22

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಅಪೋಸ್ತಲರ ಕೃತ್ಯಗಳು 19:20

ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.

ಅಪೋಸ್ತಲರ ಕೃತ್ಯಗಳು 21:20

ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ರೋಮಾಪುರದವರಿಗೆ 1:5

ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.

ರೋಮಾಪುರದವರಿಗೆ 16:26

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

ಕೊಲೊಸ್ಸೆಯವರಿಗೆ 1:6

ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

2 ತೆಸಲೋನಿಕದವರಿಗೆ 1:8

ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

2 ತಿಮೋಥೆಯ 2:9

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ಹೆಬ್ರಿಯರಿಗೆ 5:9

ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

ಹೆಬ್ರಿಯರಿಗೆ 11:8

ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

Interlinear

Choose Theme