ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
Cross references
ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.