ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
Cross references
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.