ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
Cross references
ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.