ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
Cross references
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.