ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
Cross references
ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ