ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
Cross references
ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು
ಯಾಜಕರೂ ಲೇವಿಯರೂ ಇವುಗಳನ್ನು ತಂದರು.
ಇವನ ಮಗನು ನೋನನು, ಇವನ ಮಗನು ಯೆಹೋಷುವನು.
ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.