ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
Cross references
ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ