ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.