ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
Cross references
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.