ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
Cross references
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.