ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
Cross references
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--